Kannada NewsKarnataka NewsLatest

*BREAKING: ವೇದಿಕೆಯಲ್ಲಿಯೇ ಕುಸಿದು ಬಿದ್ದ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ*

ಪ್ರಗತಿವಾಹಿನಿ ಸುದ್ದಿ: ಕರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಕುಸಿದು ಬಿದ್ದು, ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೌಟ್ಸ್ ಆಂಡ್ ಗೈಡ್ಸ್ ಆಯುಕ್ತ ಪಿಜಿಆರ್ ಸಿಂಧ್ಯಾ ಅವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳುವಾಗ ಏಕಾಏಕಿ ನ್ಯಾ.ಸಂತೋಷ್ ಹೆಗ್ಡೆ ವಾಂತಿ ಮಾಡಿಕೊಂಡಿದ್ದಾರೆ. ಬಳಿಕ ಕುರ್ಚಿಯಲ್ಲಿ ಕುಳಿತುಕೊಳ್ಳುವಾಗ ಕುಸಿದು ಬಿದ್ದಿದ್ದಾರೆ. ಅದೇ ವೇದಿಕೆಯಲ್ಲಿದ್ದ ಸ್ಪೀಕರ್ ಯು.ಟಿ.ಖಾದರ್ ತಕ್ಷಣ ಅವರನ್ನು ಮೇಲಕೆತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

Home add -Advt

ಸಂತೋಷ್ ಹೆಗ್ಡೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

Related Articles

Back to top button