Kannada NewsKarnataka NewsPolitics
*ಕೆ.ಎನ್.ರಾಜಣ್ಣ ಅವರ ರಾಜೀನಾಮೆ ಅಂಗೀಕರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯಲ್ಲಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ತಮ್ಮ ರಾಜೀನಾಮೆ ಪತ್ರವನ್ನು ಪಿಎಸ್ ಡಾ. ವೆಂಕಟೇಶಯ್ಯ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೆ.ಎನ್.ರಾಜಣ್ಣ ರಾಜೀನಾಮೆ ಅಂಗೀಕರಿಸಿದ್ದಾರೆ. ಶೀಘದಲ್ಲೇ ರಾಜಣ್ಣ ರಾಜೀನಾಮೆ ಪತ್ರ ಅಂಗೀರವನ್ನು ರಾಜ್ಯಪಾಲರಿಗೆ ಸಿಎಂ ರವಾನಿಸಲಿದ್ದಾರೆ.




