Kannada NewsKarnataka NewsLatestPolitics
*ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ನಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕುಟುಂಬ ಸಮೇತರಾಗಿ ಈಶ್ವರಪ್ಪ ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಗರದ ಮಾರಿಕಾಂಬ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯೊಂದಿಗೆ ಸಾಗಿ ಬೆಂಬಲಿಗರೊಂದಿಗೆ ತೆರಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.



