Kannada NewsKarnataka NewsLatestPolitics

*ಮಾಜಿ ಸಿಎಂ HDKಯಿಂದ ಶುಭ ಸುದ್ದಿ ಬಂದಿದೆ ಎಂದ ಮಾಜಿ ಸಚಿವ ಈಶ್ವರಪ್ಪ*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕರೆ ಮಾಡಿ ಶುಭ ಸುದ್ದಿ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮನೆ ದೇವರು ಮಲ್ಲೇಶ್ವರ, ಚೌಡೇಶ್ವರಿ ದೇಗುಲದಲ್ಲಿ ವಿಶೇಷ ಹೋಮ ನಡೆಸಿದ ಕೆ.ಎಸ್.ಈಶ್ವರಪ್ಪ, ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಕುಮಾರಸ್ವಾಮಿಯವರಿಂದ ಫೋನ್ ಕರೆ ಬ್ಂದಿದ್ದು, ಶುಭ ಸುದ್ದಿ ನೀಡಿದ್ದಾರೆ ಎಂದರು.

ಇಂದು ಮಲ್ಲೇಶ್ವರ, ಚೌಡೇಶ್ವರಿ ದೇವಿಯ ವಿಶೇಷ ಪೂಜೆ ಮಾಡುತ್ತಿದ್ದೆವು. ಈ ಸಂದರ್ಭದಲ್ಲಿಯೇ ಕುಮಾರಸ್ವಾಮಿಯವರು ಕರೆ ಮಾಡಿ ಶುಭ ಸುದ್ದಿ ನೀಡಿದ್ದಾರೆ. ಹಿಂದೂ ಧರ್ಮದ ಪ್ರಕಾರ ಪೂಜೆಯಂತಹ ವಿಶೇಷ ಸಂದರ್ಭದಲ್ಲಿ ಒಳ್ಳೆಯ ಸುದ್ದಿ ಬಂದರೆ ಯಶಸ್ಸು ಸಿಗುತ್ತೆ ಎಂಬ ನಂಬಿಕೆಯಿದೆ. ಹಾಗಾಗಿ ಇದಿಒಂದು ಶುಭ ಸೂಚಕ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button