Latest

*ಕ್ಯಾಪ್ಟನ್ ಗೆ ಪ್ಲೇಸ್ ಇಲ್ಲ, ಪಾಪ ಇನ್ನು ಫಾಲೋವರ್ಸ್ ಗತಿಯೇನು?*

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ವೀಕ್ ಆಗಿದ್ದಕ್ಕೇ ಚುನಾವಣೆಯಲ್ಲಿ ಸೋತಿದ್ದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ ಲೀಡರ್ ಎಂಬ ಸಿದ್ದರಾಮಯ್ಯ ವ್ಯಂಗ್ಯಕ್ಕೆ ತಿರುಗೇಟು ನೀಡಿದ ಅವರು, ಸಿದ್ದರಾಮಯ್ಯ ವೀಕ್ ಲೀಡರ್ ಆಗಿದ್ದಕ್ಕೇ ಸೋತಿದ್ದು. ಯಾವಾಗಲೂ ಯಾರು ವೀಕ್ ಅಂತಾ ಹೇಳ್ತಾರೋ ಅವರೇ ವೀಕ್. ಸಿದ್ದರಾಮಯ್ಯ ಸ್ಟ್ರಾಂಗ್ ಲೀಡರ್ ಆಗಿದ್ದರೆ ಯಾಕೆ ಸೋಲುತ್ತಿದ್ದರು? ಎಂದರು.

ಒಂದು ಬಾರಿ ಬಾದಾಮಿ, ಮತ್ತೊಮ್ಮೆ ಕೋಲಾರ, ಈಗ ವರುಣಾ ಅಂತಿದ್ದಾರೆ. ಕಾಂಗ್ರೆಸ್ ನಲ್ಲಿ ಕ್ಯಾಪ್ಟನ್ ಗೆ ಪ್ಲೇಸ್ ಇಲ್ಲ, ಪಾಪ ಇನ್ನು ಫಾಲೋವರ್ಸ್ ಗತಿಯೇನು? ಎಂದು ಲೇವಡಿ ಮಾಡಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರು ಆಡುವ ಆಟ ಬಿಜೆಪಿ ಮೇಲೆ ನಡೆಯಲ್ಲ. ರಾಜ್ಯದ ಜನರ ಮೇಲೂ ನಡೆಯಲ್ಲ. ಬಿಜೆಪಿ, ಕೆಜೆಪಿ ಒಡೆದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು ಎಂದು ವಾಗ್ದಾಳಿ ನಡೆಸಿದರು.

Home add -Advt

ಇದೇ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಕಡೆಗಣನೆ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಬಿಎಸ್ ವೈ ಕಡೆಗಣನೆಯಾದರೆ ನನಗೆ ಈ ವಿಚಾರ ಗೊತ್ತಿಲ್ಲ. ಅಕಸ್ಮಾತ್ ಗೊಂದಲವೇನಾದರೂ ಆದರೆ ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ. ಹೈಕಮಾಂಡ್ ಸೂಚಿಸಿದ್ದನು ಪಾಲನೆ ಮಾಡುವ ಪಕ್ಷ ನಮ್ಮದು. ನಮಗೆ ಹೇಳುವವರು ಕೇಳುವವರು ಇದ್ದಾರೆ. ಆದ್ರೆ ಕಾಂಗ್ರೆಸ್ ನಲ್ಲಿ ಖರ್ಗೆ ಟೀಂ ಕಟ್ಟಿಕೊಂಡು ದೆಹಲಿಗೆ ಹೋದ್ರು. ಸಿದ್ದರಾಮಯ್ಯ, ಡಿ.ಕೆ.ಶಿ ತಂಡವನ್ನು ಕರೆದುಕೊಂಡು ಹೋಗಿದ್ದಾರೆ. ಎರಡೂ ಟೀ ಒಟ್ಟಿಗೆ ಹೋಗಬೇಕು ಎಂದು ಹೈಕಮಾಂಡ್ ಸೂಚಿಸಿದೆ. ಆದರೂ ಪ್ರತ್ಯೇಕ ಬಸ್ ಯಾತ್ರೆಗೆ ಇವರು ಮುಂದಾಗಿದ್ದಾರೆ. ಆದರೆ ಬಿಜೆಪಿಯಲ್ಲಿ ಹಾಗಿಲ್ಲ. ಎಲ್ಲರೂ ಒಗ್ಗಟ್ಟಾಗಿ ಹೋಗುತ್ತೇವೆ. ಕೇಂದ್ರದಲ್ಲಿ ಮೋದಿ ರಾಜ್ಯದಲ್ಲಿ ಬೊಮ್ಮಾಯಿ ಮತ್ತು ಬಿಎಸ್ ವೈ ನಾಯಕತ್ವ ಮುಂದುವರೆಯಲಿದೆ ಎಂದು ಹೇಳಿದರು.
ಎಂದರು.

*ಬಿಜೆಪಿಯಲ್ಲಿ ನನ್ನದೇ ಆದ ಶಕ್ತಿಯಿದೆ; ಮಾಜಿ ಸಿಎಂ ಯಡಿಯೂರಪ್ಪ ಖಡಕ್ ಮಾತು*

https://pragati.taskdun.com/b-s-yedyurappareactionj-p-naddakoppala-programme/

Related Articles

Back to top button