Kannada NewsKarnataka NewsLatest
*ಪತ್ನಿಯನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನು ಕುಡುಗೋಲಿನಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದು, ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಲಬುರಗಿನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಂಜಲಿ ಕೊಲೆಯಾದ ಮಹಿಳೆ. ಲಕ್ಷ್ಮೀ ಪುತ್ರ ಪತ್ನಿಯನ್ನೇ ಕೊಲೆಗೈದ ಪತಿ. ಯಾವ ಕಾರಣಕ್ಕೆ ಪತ್ನಿಯನ್ನು ಕೊಲೆಗೈದಿದ್ದಾನೆ ಎಂಬುದು ತಿಳಿದುಬಂದಿಲ್ಲ.
ಮಗುವಿನೊಂದಿಗೆ ಲಕ್ಷ್ಮೀಪುತ್ರ ಬಾವಿಗೆ ಹಾರುತ್ತಿದ್ದಂತೆಯೇ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ಆದರೆ ಲಕ್ಷ್ಮೀ ಪುತ್ರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


