Kannada NewsKarnataka NewsLatest

*ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆಗೆ ಶರಣಾದ ಎಸಿಸಿ ಸಿಮೆಂಟ್ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಎಸಿಸಿ ಸಿಮೆಂಟ್ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ವಿಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ನಡೆದಿದೆ.

47 ವರ್ಷದ ರಮೇಶ್ ಪವಾರ್ ಮೃತರು. ಮೃತ ರಮೇಶ್ ಪವಾರ್ ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಯ. ವಾಡಿ ಪಟ್ಟಣದ ಎಸಿಸಿ ಕಾಲೋನಿಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ರಮೇಶ್ ಪವಾರ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಡಿಟ್ಟಿದ್ದು, ಅದರಲ್ಲಿ ಕಾರ್ಖಾನೆಯ ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ.

ವಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button