Kannada NewsKarnataka NewsLatest

*ಸಿಲಿಂಡರ್ ಸ್ಫೋಟ: ಮಕ್ಕಳು ಸೇರಿ ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ ಹಾಗೂ ಮೂವರು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಇಟವಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ತಾಯಿ ಅಂಜನಾ, ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾ ಗಾಯಾಳುಗಳು. ಗಾಯಾಳುಗಳನ್ನು ಕಲಬುರ್ಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಕೀರ್ತನಾಳಿಗೆ ಗಂಭೀರವಾದ ಗಾಯಗಳಾಗಿವೆ. ಚಿಕಿತ್ಸೆ ಮುಂದುವರೆದಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button