Kannada NewsKarnataka NewsLatest

*ಸಿಲಿಂಡರ್ ಸ್ಫೋಟ: ಮಕ್ಕಳು ಸೇರಿ ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ ಹಾಗೂ ಮೂವರು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಇಟವಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ತಾಯಿ ಅಂಜನಾ, ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾ ಗಾಯಾಳುಗಳು. ಗಾಯಾಳುಗಳನ್ನು ಕಲಬುರ್ಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಕೀರ್ತನಾಳಿಗೆ ಗಂಭೀರವಾದ ಗಾಯಗಳಾಗಿವೆ. ಚಿಕಿತ್ಸೆ ಮುಂದುವರೆದಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button