Latest

ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆಯಲ್ಲಿ ಇಂದು ಕಲಬುರ್ಗಿಯಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು ಮಾಡಲಾಗಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶಕ್ಕಾಗಿ ವೇದಿಕೆ, ಊಟ ಸೇರಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಆನಂದ್ ಮಾಮನಿ ವಿಧಿವಶರಾಗಿರುವ ಕಾರಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಮಾವೇಶ ರದ್ದುಗೊಳಿಸುವಂತೆ ಸೂಚಿಸಿದ್ದಾರೆ.

Home add -Advt

ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಜನಸಂಕಲ್ಪ ಸಮಾವೇಶವನ್ನು ನವೆಂಬರ್ 6ಕ್ಕೆ ಮುಂದೂಡಲಾಗಿದೆ.

ಕಿತ್ತೂರು ಉತ್ಸವ ಮುಂದೂಡಿಕೆ – ಜಿಲ್ಲಾಧಿಕಾರಿ ಆದೇಶ

https://pragati.taskdun.com/%e0%b2%b0%e0%b2%be%e0%b2%9c%e0%b3%8d%e0%b2%af/kittur-utsava-postphoned-dc-order/

Related Articles

Back to top button