Kannada NewsKarnataka NewsLatest

*ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಲಾರಿ ಹಾಗೂ ಜೀಪು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.

ಅಫಜಲಪುರದ ನೀರಾವರಿ ಕಚೇರಿ ಬಳಿ ಈ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ (40), ಶಂಕರ್ (55), ಸಿದ್ದಮ್ಮ(50), ಹುಚ್ಚಪ್ಪ ಮೃತ ದುರ್ದೈವಿಗಳು.

Home add -Advt

ಸಾವನ್ನಪ್ಪಿದವರೆಲ್ಲರೂ ಅಫಜಲಪುರದ ಮಾಡ್ಯಾಳ ಗ್ರಾಮದ ನಿವಾಸಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳು ಪೂಜಾ ದೊದ್ಡಮನಿ ಎಂಬುವವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Related Articles

Back to top button