Kannada NewsKarnataka NewsLatest
*ಓದು ಎಂದು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಚನ್ನಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಬಳಿ ನಡೆದಿದೆ.
17 ವರ್ಷದ ಕಾವೇರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರತಿದಿನ ತಪ್ಪದೇ ಕಾಲೇಜಿಗೆ ಹೋಗಿ ಚೆನಾಗಿ ಓಡಬೇಕು ಎಂದು ಪೋಷಕರು ವಿದ್ಯಾರ್ಥಿನಿಗೆ ಬೈದು ಬುದ್ಧಿಹೇಳಿದ್ದರಂತೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಮಾಡಿದ್ದಾಳೆ.
ರಾತ್ರಿ ಮನೆಯ್ಯಿಂದ ಹೊರ ಹೋಡ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾವೇರಿ ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯು ಓದುತಿದ್ದಳು ಎಂದು ತಿಳಿದುಬಂದಿದೆ.




