*ಮಳೆ ನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಈ ನಡುವೆ ಕಲಬುರ್ಗಿ ನಗರದಲ್ಲಿ ದುರಂತವೊಂದು ಸಂಭವಿಸಿದೆ. ನಗರದ ದುಬೈ ಕಾಲೋನಿಯಲ್ಲಿ ಮಳೆನೀರು ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಓವರ್ ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕಾಗಿ ಈ ತಗ್ಗುಗುಂಡಿ ತೆಗೆಯಲಾಗಿತ್ತು. ಇಬ್ಬರು ಬಾಲಕರು ತಗ್ಗುಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. 11 ವರ್ಷದ ಅಭಿ ಹಾಗೂ 12 ವರ್ಷದ ಅಜಯ್ ಮೃತ ಬಾಲಕರು. ಮಳೆ ನೀರಿನಿಂದ ತಗ್ಗುಗುಂಡಿ ಸಂಪೂರ್ಣ ಜಲಾವೃತವಾಗಿತ್ತು. … Continue reading *ಮಳೆ ನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ*