Kannada NewsKarnataka NewsLatest

*ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅಧ್ಯಕ್ಷರಾಗಿ ಅಜಯ್ ಸಿಂಗ್ ಅವರನ್ನು ಒಂದು ವರ್ಷದ ಅವಧಿಗೆ ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಇದೇ ವೇಳೆ 11 ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯಸಭಾ ಸದಸ್ಯ ಸಯ್ಯದ್ ನಾಜೀರ್ ಹುಸೇನ್, ವಿಧಾನಪರಿಷತ್ ಸದಸ್ಯರಾದ ಅರವಿಂದ ಅರಳಿ, ತಿಪ್ಪಣ್ಣಪ್ಪ ಕಾನಕನೂರ, ಶಾಸಕರಾದ ಅಜಯ್ ಸಿಂಗ್, ಬಿ.ಆರ್.ಪಾಟೀಲ್, ರಾಜಾ ವೆಂಕಟಪ್ಪ ನಾಯಕ್, ಹಂಪನಗೌಡ ಬಾದರ್ಲಿ, ಬಸವರಾಜ್ ರಾಯರೆಡ್ಡಿ, ರಾಘವೇಂದ್ರ ಇಟ್ನಾಳ್, ತುಕಾರಾಮ್, ಹೆಚ್. ಆರ್.ಗವಿಯಪ್ಪ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Home add -Advt

Related Articles

Back to top button