Karnataka News

*ಕಾಲುವೆಯಲ್ಲಿ ಈಜಲು ಹೋಗಿ ದುರಂತ: ಇಬ್ಬರು ಕುರಿಗಾಹಿ ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಇಲ್ಲಿನ ಸುರಪುರ ತಾಲೂಕಿನ ಏವೂರು ಬಳಿಯ ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ವಿಜಯಪುರ ಮೂಲದ ಜಟ್ಟೆಪ್ಪ (19), ಕುರಿಯಪ್ಪ (19) ಮೃತ ಯುವಕರು.

Home add -Advt

ಕುರಿ ಮೇಯಿಸಲು 6 ಜನರು ಹೋಗಿದ್ದರು. ಈ ವೇಳೆ ಜೆಬಿಸಿ ಕಾಲುವೆಯಲ್ಲಿ ಈಜಲೆಂಡು 6 ಜನ ನೀರಿಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ.

Related Articles

Back to top button