*ಪಾಲಿಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬಾರದು: ಕನ್ನಡ ಸಂಘಟನೆಗಳ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸಿರುವ ಹೋರಾಟ ಇಂದು ಹೊಸ ತಿರುವು ಪಡೆದಿದೆ. ಪಾಲಿಕೆಯಲ್ಲಿ ಬೆಳಗಾವಿಯು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಗೊತ್ತುವಳಿ ಸ್ವೀಕರಿಸುವವರೆಗೂ ಪಾಲಿಕೆಗೆ ರಾಜ್ಯ ಸರಕಾರ ಯಾವದೇ ರೀತಿಯ ಅನುದಾನ ಬಿಡುಗಡೆ ಮಾಡಬಾರದೆಂದು ಗಡಿನಾಡು ಕನ್ನಡಿಗರ ಸೇನೆಯು ಆಗ್ರಹಿಸಿದೆ. ಈ ಕುರಿತು ಮಂಗಳವಾರ ಮುಂಜಾನೆ ಪ್ರಾದೇಶಿಕ ಆಯುಕ್ತರ ಕಚೇರಿಯ ಎದುರು ಮಹಾಪೌರರ ಹಾಗೂ ಉಪ ಮಹಾಪೌರರ ವಿರುದ್ಧ … Continue reading *ಪಾಲಿಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬಾರದು: ಕನ್ನಡ ಸಂಘಟನೆಗಳ ಆಗ್ರಹ*