Film & Entertainment

*ಕಾಂತಾರ-2 ಸಿನಿಮಾ ತಂಡದಿಂದ ಅರಣ್ಯ ಪ್ರದೇಶಕ್ಕೆ ಹಾನಿ ಆರೋಪ*

ಪ್ರಗತಿವಾಹಿನಿ ಸುದ್ದಿ: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ-2 ಸಿನಿಮಾ ಚಿತ್ರೀಕರಣಕ್ಕಾಗಿ ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಹಾಸನ ಜಿಲ್ಲೆಯ ಸಕಲೇಶಪುರದ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಂತಾರಾ-2 ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜನವರಿ 2ರಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಗೋಮಾಳ ಜಾಗದಲ್ಲಿ ಶೂಟಿಂಗ್ ಗಾಗಿ ಚಿತ್ರ ತಂಡ ಪರವಾನಗಿ ಪಡೆದಿದೆ. ಆದರೆ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಾಕಿ ಚಿತ್ರೀಕರಣ ಮಡಲಾಗುತ್ತಿರುವುದರಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗುತ್ತಿದೆ.

ಅಲ್ಲದೇ ಕಾಡ್ಗಿಚ್ಚಿನಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button