Latest

*ಈ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ ಅಬ್ಬರ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಈನಡುವೆ ಕರಾವಳಿ ಜಿಲ್ಲೆಗಳಲ್ಲಿ ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬೀದರ್ ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು ವಿಜಯನಗರ, ತುಮಕೂರು, ದಾವಣಗೆರೆ, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.


Related Articles

Back to top button