Karnataka News

*MES ಶವಯಾತ್ರೆ, ತಿಥಿ ಕಾರ್ಯ ನೆರವೇರಿಸಿ ಆಕ್ರೋಶ ವ್ಯಕ್ತಪಡಿಸಿದ ಕನ್ನಡಪರ ಹೋರಾಟಗಾರರು*

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಮೇಲೆ ಮರಾಠಿ, ಎಂಇಎಸ್ ಪುಂಡರ ದರ್ಪ, ದೌರ್ಜನ್ಯ ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ. ವಿವಿಧ ಕನ್ನಡ ಸಂಘಟನೆಗಳು ಎಂಇಎಸ್ ತಿಥಿ ಕಾರ್ಯ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಜಮಾವಣೆಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರು ಎಂಇಎಸ್ ಶವಯಾತ್ರೆ ನಡೆಸಿದರು. ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಶವಯಾತ್ರೆ ನಡೆಸಿ, ಫ್ರೀಡಂ ಪಾರ್ಕ್ ನಲ್ಲಿ ಎಂಇಎಸ್ ಅಂತ್ಯಸಂಸ್ಕಾರ ಮಾಡಿದರು, ಹೂವು, ವಡೆ-ಪಾಯಿಸ ಇಟ್ಟು ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ನಮಗೆ ವಡೆ-ಪಾಯಿಸ ನಿಮಗೆ, ಎಂಎಸ್ ಎಸ್ ಪುಂಡರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಒಟ್ಟಾರೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


Related Articles

Back to top button