Politics

*ಬಾನು ಮುಷ್ತಾಕ್ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಸಾಹಿತ್ಯದ ಸಂವೇದನಾಶೀಲ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ದೊರೆತಿರುವುದು ಅತ್ಯಂತ ಖುಷಿಯ ಸಂಗತಿ. ಈ ಸಂದರ್ಭದಲ್ಲಿ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬಾನು ಅವರ ‘ಹಾರ್ಟ್ ಲ್ಯಾಂಪ್’ ಸಣ್ಣ ಕಥೆಗಳ ಸಂಕಲನದ ಮೂಲಕ ಮೊದಲ ಬಾರಿಗೆ ಕನ್ನಡ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರಕಿದೆ‌. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ‘ಎದೆಯ ಹಣತೆ’ಯನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

Home add -Advt

ಬಾನು ಮುಷ್ತಾಕ್ ಅವರ ಲೇಖನಿಯಿಂದ ಮತ್ತಷ್ಟು ಕೃತಿಗಳು ಮೂಡಿ ಬರಲಿ, ಸಾಹಿತ್ಯ ಸೇವೆಯ ಲೋಕದಲ್ಲಿ ಅವರು ಮತ್ತಷ್ಟು ಹೆಸರು ಮಾಡಲೆಂದು ಸಚಿವರು ಹಾರೈಸಿದ್ದಾರೆ.

https://www.facebook.com/share/p/1Bx9Y8kygc

Related Articles

Back to top button