Latest

ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರದಲ್ಲಿ ಸಂಪುಟ ವಿಸ್ತರಣೆ ಎಂದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶೀಘ್ರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪನವರ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅರುಣ್ ಸಿಂಗ್, ನಾಯಕತ್ವ ಬದಲಾವಣೆ ಬಗ್ಗೆ ನಾವು ನಿರ್ಧರಿಸುತ್ತೇವೆ. ಈ ಬಗ್ಗೆ ಮಾತನಾಡಲು ಯತ್ನಾಳ್ ಯಾರು? ಏನಾದರೂ ಸಮಸ್ಯೆಯಿದ್ದರೆ ಪಕ್ಷದಲ್ಲಿ ಚರ್ಚಿಸಬೇಕು. ಹಲವು ಬಾರಿ ಹೇಳಿದರೂ ಮತ್ಯಾಕೆ ನಾಯಕತ್ವದ ಬಗ್ಗೆ ಪ್ರಶ್ನೆ ಬರುತ್ತದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಹೇಳಿದ್ದಾರೆ.

Home add -Advt

ಮುಂದೆ ಸ್ವಂತ ಬಲದಿಂದ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ. ಬೂತ್ ಮಟ್ಟದಿಂದ ಪಕ್ಷ ಬಲಪಡಿಸಬೇಕಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ವಿರೋಧ ಮಾಡಿದರೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತಂದಿರುವುದು ಒಳ್ಳೆಯ ಬೆಳವಣಿಗೆ ಎಂದರು.

 

Related Articles

Back to top button