Kannada NewsKarnataka NewsLatestPolitics

*ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್; ಮಾರ್ಚ್ ಮೊದಲ ವಾರದಲ್ಲಿ ನೀತಿ ಸಂಹಿತೆ ಜಾರಿ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ರಾಜ್ಯ ಬಜೆಟ್ ಮುಂದಿನ ತಿಂಗಳು ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಫೆಬ್ರವರಿಯಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಕಾರಣ ಮಾರ್ಚ್ ಮೊದಲ ವಾರದಲ್ಲಿ ನೀತಿ ಸಂಹಿತೆ ಬರಲಿದೆ. ಹಾಗಾಗಿ ಫೆಬ್ರವರಿಯಲ್ಲಿಯೇ ಬಜೆಟ್ ಮಂಡನೆ ಮಾಡಬೇಕು ಎಂದರು.

ಇದೇ ವೇಳೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಯಾವುದೇ ಧರ್ಮದವರಾಗಿರಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button