Kannada NewsLatest

ಮಹಾಶಿವರಾತ್ರಿ: ಶಿವನಾಮ ಜಪ ಮಾಡಿ ಪೂಜೆ ಸಲ್ಲಿಸಿದ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ನಿವಾಸದಲ್ಲಿ ಕುಟುಂಬ ಸಮೇತವಾಗಿ ಶಿವನಾಮ ಜಪ ಮಾಡಿ, ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಸತ್ಯ, ಸರಳತೆ, ಪ್ರಾಮಾಣಿಕತೆ ಮತ್ತು ಶಕ್ತಿಯ ಸ್ವರೂಪನಾದ ಈಶ್ವರನು ಲೋಕದಲ್ಲಿರುವ ಸರ್ವ ಸಂಕಷ್ಟಗಳಿಗೆ ಪರಿಹಾರ ನೀಡಿ, ಸಕಲರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಜ್ಯೋತಿಪ್ರಸಾದ ಹಾಗೂ ಬಸವಪ್ರಸಾದ ಉಪಸ್ಥಿತರಿದ್ದರು.
ಕಾಂಗ್ರೆಸ್ ನಿಂದ ಬೆಂಗಳೂರಿನ ಜನತೆಗೆ ಸಂಕಷ್ಟ; ಸಿಎಂ ಬೊಮ್ಮಾಯಿ ವಾಗ್ದಾಳಿ

 

Home add -Advt

Related Articles

Back to top button