Latest

ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.

ರಾಜ್ಯಕ್ಕೆ 5 ದಶಕಗಳ ಕಾಲ ಸೇವೆ ಸಲ್ಲಿಸಿರುವ ನಾರಿಮನ್ ಅವರು ಕರ್ನಾಟಕದ ನೀರಿನ ಹಿತರಕ್ಷಣೆ ಮಾಡಿದ್ದಾರೆ. ಈಗಲೂ ಅವರ ಸಲಹೆ ಸೂಚನೆಗಳಿಗೆ ಮೌಲ್ಯ ಇದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ ಎಚ್.ಡಿ.ದೇವೇಗೌಡರ ಕಾಲದಲ್ಲಿ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದರು.

Related Articles

“ಇದೊಂದು ಸೌಜನ್ಯದ ಭೇಟಿಯಾಗಿದ್ದು ಅವರಿಗೆ ಧನ್ಯವಾದವನ್ನು ಹೇಳುವುದಕ್ಕೆ ಬಂದಿದ್ದೇನೆ. ಗಡಿ, ಜಲ ವಿವಾದದ ಬಗ್ಗೆ ಯಾವುದೇ ವಿಶೇಷ ಚರ್ಚೆ ಮಾಡಿಲ್ಲ,” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು; ಸಿಎಂ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button