Latest

* ಗಡಿ ವಿವಾದ ಮಹಾರಾಷ್ಟ್ರಕ್ಕೆ ರಾಜಕೀಯ ವಸ್ತುವಾಗಿದೆ; ಸಿಎಂ ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆದಿದ್ದಾರೆ. ಹಾಗಾಗಿ ಎಲ್ಲಾ ಸಿದ್ಧತೆಗಳೊಂದಿಗೆ ಚರ್ಚೆಗೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂಗಿದೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಸರ್ಕಾರ 6 ದಶಕಗಳಿಂದ ಗಡಿ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಅದಕ್ಕೆ ಗಡಿ ವಿವಾದ ರಾಜಕೀಯ ವಸ್ತುವಾಗಿದೆ. ಆದರೆ ನಮಗೆ ಹಾಗಲ್ಲ. ಜನರ ರಕ್ಷಣೆ, ನೆಲ ಜಲ, ಭಾಷೆ ಗಡಿ ಮುಖ್ಯ. ಈ ನೆಲ, ಜಲ ಭಾಷೆ ರಕ್ಷಣೆಯಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಗಡಿ ವಿಚಾರದಲ್ಲಿ ನಮ್ಮ ನಿಲುವೇನು ಎಂಬುದನ್ನು ಮತ್ತೊಮ್ಮೆ ಗೃಹ ಸಚಿವರಿಗೆ ಸ್ಪಷ್ಟ ಪಡಿಸುತ್ತೇನೆ. ಗಡಿ ವಿಚಾರವಾಗಿ ಈಗಾಗಲೇ ಇರುವ ವರದಿ, ಕಾನೂನು ಇರುವ ಮಾಹಿತಿಗಳ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇನೆ. ರಾಜ್ಯದ ನಿಲುವನ್ನು ತಿಳಿಸುತ್ತೇನೆ ಎಂದರು. ಪ್ರಮುಖವಾಗಿ ಇದೇ ವಿಚಾರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಸಂಪುಟ ವಿಸ್ತರಣೆ ವಿಚಾರವಾಗಿಯೂ ಸಿದ್ಧತೆ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಸ್ತಾಪವಾದರೆ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

*ನಟಿ ಅಭಿನಯ ಸೇರಿದಂತೆ ಮೂವರಿಗೆ ಜೈಲುಶಿಕ್ಷೆ; ಹೈಕೋರ್ಟ್ ಮಹತ್ವದ ತೀರ್ಪು*

https://pragati.taskdun.com/actress-abhinaya2-yers-jailhigh-courtdowry-harassment-case/

*ಸಿದ್ದರಾಮಯ್ಯ ಹಿಂತಿರುಗಿ ನೋಡಿದರೆ ಒಳ್ಳೇದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದೇಕೆ?*

https://pragati.taskdun.com/cm-basavaraj-bommaisiddaramaiahhubli/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button