ಪ್ರತಿಜ್ಞಾ ವಿಧಿ ಕಾರ್ಯಕ್ರಮ…. ಕಾಂಗ್ರೆಸ್ ದೇವಸ್ಥಾನ…. ಹೆಮ್ಮೆಯ ಸುಪುತ್ರ….
7676366666 ನಂಬರಿಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಬೆಂಬಲಿಸಿ
ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ನಾಂದಿ
ಹೆಮ್ಮೆಯ ಸುಪುತ್ರ
ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಲಕ್ಷ್ಮಿ ಹೆಬ್ಬಾಳಕರ್, ಅದನ್ನು ಕಾಂಗ್ರೆಸ್ ದೇವಸ್ಥಾನ ಎಂದು ಬಣ್ಣಿಸಿದರು.
ನಾನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದಾಗ ಕಷ್ಟಪಟ್ಟು ಈ ಜಾಗವನ್ನು ಪಡೆದು ಇಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಚಾಲನೆಯನ್ನು ನೀಡಿದ್ದೆ. ಇಲ್ಲಿ ಮೊದಲ ಪತ್ರಿಕಾಗೋಷ್ಠಿ ನಡೆಸುತ್ತಿದ್ದೇನೆ. ಇದನ್ನು ನಾನು ಕಾಂಗ್ರೆಸ್ ದೇವಸ್ಥಾನ ಎಂದು ಕರೆಯುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಭಾವನಾತ್ಮಕವಾಗಿ ನುಡಿದರು.
ಡಿ.ಕೆ.ಶುವಕುಮಾರ ಅವರ ಜೊತೆಗೆ ಜಿಲ್ಲೆಯ ಹೆಮ್ಮೆಯ ಸುಪುತ್ರ ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಮತ್ತು ಸಲೀಂ ಅಹ್ಮದ್ ಅವರು ಕೂಡ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.