GIT add 2024-1
Laxmi Tai add
Beereshwara 33

ಸಿಎಂಗೆ ಮನವಿ ಸಲ್ಲಿಸಿದ ಸುರೇಶ ಅಂಗಡಿ ಅಳಿಯಂದಿರು

ಅಳಿಯಂದಿರಾದ ಡಾ.ರಾಹುಲ್ ಪಾಟೀಲ ಮತ್ತು ಸಂಕಲ್ಪ ಶೆಟ್ಟರ್

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಈಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಳಿಯಂದಿರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.

Emergency Service

ಅಳಿಯಂದಿರಾದ ಡಾ.ರಾಹುಲ್ ಪಾಟೀಲ ಮತ್ತು ಸಂಕಲ್ಪ ಶೆಟ್ಟರ್ ಅವರು ರಾಜ್ಯ ಕೈಗಾರಿಕೆ ಸಚಿವರೂ, ಸುರೇಶ ಅಂಗಡಿಯವರ ಬೀಗರೂ ಆಗಿರುವ ಜಗದೀಶ ಶೆಟ್ಟರ್ ಅವರ ಉಪಸ್ಥಿತಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸುರೇಶ ಅಂಗಡಿ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು, ದೆಹಲಿಯ ದ್ವಾರಕಾದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಸುರೇಶ ಅಂಗಡಿಯವರ ಅಂತ್ಯಕ್ರಿಯೆ ನಡೆಸಲಾಗಿದ್ದು ಅಲ್ಲಿ ತಡೆಗೊಡೆ ಮತ್ತು ಸಮಾಧಿ ನಿರ್ಮಾಣ ಮಾಡುವಂತೆ ಅವರು ಕೋರಿದರು. ಸಂಬಂಧಿಸಿದವರಿಗೆ ಈ ಕುರಿತು ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

 

Bottom Add3
Bottom Ad 2