ಯಡಿಯೂರಪ್ಪ ಭಾನುವಾರ ತವರಿಗೆ: ಏನು ವಿಶೇಷ ಗೊತ್ತೆ?
ಫೆಬ್ರವರಿಯಲ್ಲಿ ತಮ್ಮ ಜನ್ಮದಿನ ಆಚರಣೆಗೆ ಯಡಿಯೂರಪ್ಪ ಶಿವಮೊಗ್ಗಕ್ಕೆ ಹೋಗಿದ್ದರು.
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 7 ತಿಂಗಳ ನಂತರ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.
ಫೆಬ್ರವರಿಯಲ್ಲಿ ತಮ್ಮ ಜನ್ಮದಿನ ಆಚರಣೆಗೆ ಯಡಿಯೂರಪ್ಪ ಶಿವಮೊಗ್ಗಕ್ಕೆ ಹೋಗಿದ್ದರು. ನಂತರ ಕೊರೋನಾ ಹಿನ್ನೆಲೆಯಲ್ಲಿ ಅವರು ಕಳೆದ 7 ತಿಂಗಳು ತವರು ಜಿಲ್ಲೆಗೆ ಹೋಗಿರಲಿಲ್ಲ. ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಿಕಾರಿಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ.
ಭಾನುವಾರ ತಮ್ಮ ಮನೆಯಲ್ಲೇ ವಾಸ್ತವ್ಯ ಹೂಡುವ ಅವರು 19 ಹಾಗೂ 20ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾಲ್ಗೊಂಡು 20ರಂದು ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.