Kannada NewsKarnataka NewsLatest

*ಇಂದಿನಿಂದ ಕೊಂಚ ತಣ್ಣಗಾದ ವರುಣಾರ್ಭಟ: ಗಣೇಶ ಚತುರ್ಥಿಯಿಂದ ಮತ್ತೆ ಹೆಚ್ಚಾಗಲಿದೆ ಮಳೆ ಅಬ್ಬರ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆರಾಯ ಇಂದಿನಿಂದ ಕೊಂಚ ತಣ್ಣಗಾಗಿದ್ದಾನೆ. ಆದರೆ ಗಣೇಶ ಹಬ್ಬದಿಂದ ಮತ್ತೆ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಧಾರಾಕಾರ ಮಳೆ, ಪ್ರವಾಹದಿಂದಾಗಿ ತತ್ತರಿಸಿ ಹೋಗಿವೆ. ಇಂದಿನಿಂದ ಮಳೆ ಆರ್ಭಟ ಸ್ವಲ್ಪ ಕಡಿಮೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಇಂದೂ ಮಳೆಯಾಗಲಿದೆ ಆದರೆ ಅಬ್ಬರದ ಮಳೆ ಕಡಿಮೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button