Latest

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-2021 ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2021ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಐದು ಹಿರಿಯ ಸಾಹಿತಿಗಳಿಗೆ ಗೌರವ ಪ್ರಶಸ್ತಿ ಹಾಗೂ 10 ಸಾಹಿತಿಗಳಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.

ಗೌರವ ಪ್ರಶಸ್ತಿ: ಜಿನದತ್ತ ದೇಸಾಯಿ, ಡಾ.ನಾ.ಮೊಗಸಾಲೆ, ಡಾ.ಸರಸ್ವತಿ ಚಿಮ್ಮಲಗಿ, ಪ್ರೊ.ಬಸವರಾಜ ಕಲ್ಗುಡಿ, ಶ್ರೀ ಯಲ್ಲಪ್ಪ ಕೆ.ಕೆ.ಪುರ ಇವರು ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಶ್ರೀ ಪ್ರಶಸ್ತಿ: ಡಾ.ಚಂದ್ರಕಲಾ ಬಿದರಿ, ಪ್ರೊ.ಎಂ.ಎನ್ ವೆಂಕಟೇಶ್, ಡಾ.ಚನ್ನ ಬಸವಯ್ಯ ಹಿರೇಮಠ, ಅಬ್ದುಲ್ ರಶೀದ್, ಡಾ. ವೈ.ಎಂ.ಭಜಂತ್ರಿ, ಡಾ. ಮ. ರಾಮಕೃಷ್ಣ , ಜೋಗಿ (ಗಿರೀಶ್ ರಾವ್ ಹತ್ವಾರ್), ಗಣೇಶ ಅಮೀನಗಡ, ಮೈಸೂರು ಕೃಷ್ಣಮೂರ್ತಿ ಹಾಗೂ ಆಲೂರು ದೊಡ್ಡನಿಂಗಪ್ಪ.

ಗೌರವ ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಹೊಂದಿದ್ದು, ಸಾಹಿತ್ಯ ಶ್ರೀ ಪ್ರಶಸ್ತಿಯು 25,000 ನಗದು, ಫಲಕ,ಶಾಲು, ಹಾರ ಮತ್ತು ಪ್ರಮಾಣಪತ್ರವನ್ನು ಹೊಂದಿರಲಿದೆ.
ಯುಗಾದಿ ಹಬ್ಬ ಇನ್ಮುಂದೆ “ಧಾರ್ಮಿಕ ದಿನವನ್ನಾಗಿ” ಆಚರಿಸಲು ನಿರ್ಧಾರ

Home add -Advt

Related Articles

Back to top button