Kannada NewsKarnataka NewsLatest

*ದೇವಾಲಯಗಳ ಅನುದಾನ ತಡೆ ಆದೇಶ ವಾಪಸ್ ಪಡೆದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ನೀಡಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಮುಜರಾಯಿ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಬಿಡುಗಡೆಯಾಗಿದ್ದ ಅನುದಾನಕ್ಕೆ ತಡೆ ನೀಡಿದ್ದ ಬೆನ್ನಲ್ಲೇ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನ ಬಿಡುಗಡೆಗೆ ತಡೆ ಆದೇಶ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಸಚಿವರ ಸೂಚನೆ ಮೇರೆಗೆ ದೇಗುಲಗಳ ಅನುದಾನಕ್ಕೆ ತಡೆ ಆದೇಶವನ್ನು ವಾಪಸ್ ಪಡೆದು ಮುಜರಾಯಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.


Home add -Advt

Related Articles

Back to top button