*ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ*

ಪ್ರಗತಿವಾಹಿನಿ ಸುದ್ದಿ: ರಣಬಿಸಿಲ ಹೊಡೆತಕ್ಕೆ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿಗರಿಗೆ ಮೇಘರಾಜ ತಂಪೆರೆದಿದ್ದಾನೆ. 108 ದಿನಗಳ ಬಳಿಕ ಸಿಲಿಕಾನ್ ಸಿಟಿಗೆ ಮಳೆರಾಯನ ಆಗಮನವಾಗಿದೆ. ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದ ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಬಿಸಿಲ ಝಳದಿಂದ ಕಾದ ಕಾವಲಿನಂತಾಗಿದ್ದ ಬೆಂಗಳೂರು ತಣ್ಣಗಾಗಿದ್ದು, ಹಲವೆಡೆ ಸಾರ್ವಜನಿಕರು ಮಕ್ಕಳೊಂದಿಗೆ ಮಳೆಯಲ್ಲಿ ಮಿಂದು ಸಂಭ್ರಮಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಶಿವಾನಂದ ಸರ್ಕಲ್, ರಾಜಾಜಿನಗರ, ಕೆ.ಆರ್ ಪುರ, ವೈಟ್ ಫೀಲ್ಡ್,ಆರ್.ಆರ್.ನಗರ … Continue reading *ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ*