*ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆ, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಬೆಂಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸಂಜೆಯಿಂದಲೇ ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಒಂದು ಗಂಟೆ ಬಿಡುವು ಪಡೆದ ಮಳೆರಾಯ ರಾತ್ರಿ ವೇಳೆ ಅಬ್ಬರಿ ಬೊಬ್ಬಿರಿದಿದ್ದಾನೆ. ಬೆಂಗಳೂರಿನಾದ್ಯಂತ ಏಕಾಏಕಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನರು ತತ್ತರಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಮಳೆಯಾಗುತ್ತಿದೆ. ಬೆಂಗಳೂರು, ಕೊಡಗು, … Continue reading *ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*