Election NewsKarnataka NewsLatestPolitics

*ಉಪಚುನಾವಣಾ ಮತ ಎಣಿಕೆ: ಯಾವ ಕ್ಷೇತ್ರದಲ್ಲಿ ಯಾರು ಮುನ್ನಡೆ?*

ಪ್ರಗತಿವಾಹಿನಿ ಸುದ್ದಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಜೊತೆಗೆ ಇಂದು ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಪ್ರಕಟವಾಗುತ್ತಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಚುರುಕುಗೊಂಡಿದೆ.

ಬೆಣ್ಣೆನಗರಿ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ನಡುವೆ ಹಾವು ಏಣಿ ಆಟ ಆರಂಭವಾಗಿದೆ. ಕಾಂಗ್ರೆಸ್ ನ ಸಮರ್ಥ ಶಾಮನೂರು ಆರಂಭಿಕ ಮುನ್ನಡೆಗಳಿಸಿದ್ದರೂ ಸದ್ಯದ ಮಾಹಿತಿ ಪ್ರಕಾರ ಹಿನ್ನಡೆಯಲ್ಲಿದ್ದಾರೆ.

Home add -Advt

ದಾವಣಗೆರೆಯಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಗಿದ್ದು, ಮೊದಲ ಸುತ್ತಿನಲ್ಲಿ ಸಮರ್ಥ ಶಾಮನೂರು ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 2000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಪಡೆದಿದ್ದಾರೆ.

ಬಾಗಲಕೋಟೆ ಮತ ಎಣಿಕೆಯಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ನಾಲ್ಕನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಹಿನ್ನಡೆಯಲ್ಲಿದ್ದಾರೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 10,867 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

Related Articles

Back to top button