Belagavi NewsBelgaum NewsKannada NewsKarnataka NewsLatestUncategorized

*5 ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದರೆ ಇನ್ನೂ ಕೆಲ ಜಿಲ್ಲೆಗಳಲ್ಲಿ ಬರದ ಛಾಯೆ ಆವರಸಿದೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ಜೂನ್ 30ರವರೆಗೆ ಮಳೆಯಾಗಲಿದೆ. ಇನ್ನು ಬೀದರ್, ಬೆಳಗಾವಿ,ಬಾಗಲಕೋಟೆ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ, ಹಾವೇರಿ, ಬೆಂಗಲೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button