Karnataka News

*ಭಾರಿ ಮಳೆ ಮುನ್ಸೂಚನೆ; ಬೆಳಗಾವಿ ಸೇರಿದಂತೆ ವಿವಿಧೆಡೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದು ರಾಜ್ಯದ ವಿವಿಧೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಹಾವೇರಿ, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಕಲಬುರ್ಗಿ, ರಾಯಚೂರು, ಯಾದಗಿರಿ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಮರಾಜನಗರ, ಚಿತ್ರದುರ್ಗ, ರಾಮನಗರ, ತುಮಕೂರು, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.

Related Articles

Back to top button