
ಪ್ರಗತಿವಾಹಿನಿ ಸುದ್ದಿ: ಮುಂದಿನ ಎರಡು ದಿನಗಳವರೆಗೆ ಬಿರುಗಾಳಿ- ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳಕ್ಕೆ ಮುಂಗಾರು ಪ್ರವೇಶಕ್ಕೂ ಮುನ್ನವೇ ಬಿರುಗಾಳಿ-ಮಳೆ ಆರಂಭವಾಗಿದ್ದು, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಲಿದೆ.
ಮೇ 27ರವರೆಗೆ ಭಾರಿ ಗಾಳಿ, ಮಳೆಯಾಗಲಿದ್ದು, ಕರ್ವಾವಳಿ ಜಿಲ್ಲೆಗಳಲ್ಲಿ ವರುನಾರ್ಭಟ ಜೋರಾಗಿದ್ದು, ಇನ್ನಷ್ಟು ಹೆಚ್ಚಲಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣಿಸಲಾಗಿದೆ.
ಬಿರುಗಾಳಿ ಮಳೆ ದಕ್ಷಿಣ ಅರೇಬಿಯನ್ ಸಮುದ್ರದ ಕೆಲ ಭಾಗ, ಮಾಲ್ಡಿವ್ಸ್, ಲಕ್ಷದ್ವೀಪ, ಕೇರಳ, ಕರ್ನಾಟಕ, ತಮಿಳುನಾಡು, ಬಂಗಾಳದ ದಕ್ಷಿಣ, ಮಧ್ಯ, ಉತ್ತರ ಕೊಲ್ಲಿ, ಈಶಾನ್ಯ ರಾಜ್ಯಗಳ ಕೆಲ ಭಾಗಗಳಲ್ಲಿ ಈ ವಾತಾವರಣ ಮಾನ್ಸೂನ್ ಮಳೆಗೆ ಅನುಕೂಲ ಕಲ್ಪಿಸುವ ಸಾಧ್ಯತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಮುಂಜಾನೆಯಿಂದಲೇ ಬಿರುಗಾಳಿ ಬೀಸುತ್ತಿದೆ, ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗುವ ಸಾಧ್ಯತೆ ಇದೆ.