*15 ಜಿಲ್ಲೆಗಳಲ್ಲಿ ಮಹಾ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ರೆಡಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಭಾರತೀಯ ಹವಾಮಾನ ಇಲಾಖೆ ಹಠಾತ್ ಪ್ರವಾಹ ಸಂಭವಿಸುವ ಎಚ್ಚರಿಕೆ ನೀಡಿದೆ. ಈ ನಡುವೆ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಹಾ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಡಿನ 15 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಮಳೆಯಾಗಲಿದೆ. … Continue reading *15 ಜಿಲ್ಲೆಗಳಲ್ಲಿ ಮಹಾ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ರೆಡಲರ್ಟ್ ಘೋಷಣೆ*