Belagavi NewsBelgaum NewsKannada NewsKarnataka NewsLatest

*ಸೇನೆಗೆ ಸೇರಲು ಇಲ್ಲಿದೆ ಸುವರ್ಣಾವಕಾಶ: ಇಂದೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ (3ಬಿ)ಗಳ ಅರ್ಹ ಪುರುಷ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ಉಚಿತ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೇ 11 2026 ಅರ್ಜಿ ಸಲ್ಲಿಸುವ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿ ಉಪ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ 204, 2ನೇ ಮಹಡಿ, ಸುವರ್ಣ ವಿಧಾನಸೌಧ, ಹಲಗಾ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

Home add -Advt

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2407221 ಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button