Karnataka News

*ಈ ಜಿಲ್ಲೆಗಳಲ್ಲಿ ಮಳೆ, ಈ ಜಿಲ್ಲೆಗಳಲ್ಲಿ ಒಣ ಹವೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಜೊತೆಗೆ ಮಳೆಯ ಅಬ್ಬರವೂ ಜೋರಾಗುತ್ತಿದೆ. ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆಯಾಗಿತ್ತು. ಇಂದು ಮೋದಕವಿದ ವಾತಾವರಣ, ಆಗಾಗ ಬಿಸಿಲಿನ ಕಣ್ಣಾಮುಚ್ಚಾಲೆ ನಡೆದಿದೆ. ಮೈಕೊರೆವ ಚಳಿ ಮುಂದುವರೆದಿದೆ.

Home add -Advt

ಇಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button