
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆ ಬಿಸಿಲಿನ ತಾಪಕ್ಕೆ ಜನರು ಬಸವಳಿಯುತ್ತಿದ್ದು, ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ 3 ದಿನ ಭಾರಿ ಮಳೆಯಾಗಲಿದ್ದು, ಉತರ ಒಳನಾಡಿನ 8 ಜಿಲ್ಲೆಗಳಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಚಿಕ್ಕಮಗಳೂರು, ಕೊಡಗು, ಹಾಸನ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.