*ಒಂದೆಡೆ ಆಲಿಕಲ್ಲು ಮಳೆ: ಮತ್ತೊಂದೆಡೆ ಸಿಡಿಲು ಬಡಿದು ಒಂದೇ ದಿನ 7 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುನಾರ್ಭಟ ಜೋರಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದರೆ ಮತ್ತೊಂದೆಡೆ ಬಿರುಗಾಳಿ, ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದೆ. ಗುಡುಗು-ಸಿಡಿಲಭರಕ್ಕೆ ರಾಜ್ಯದಲ್ಲಿ ಒಂದೇ ದಿನ 7 ಜನರು ಸಾವನ್ನಪ್ಪಿದ್ದಾರೆ. ಬಳ್ಳಾರಿಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇನ್ನುಳಿದ ಜಿಲ್ಲೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬಳ್ಳಾರಿಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲಿಗೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುರಿ ಮೇಯಿಸಲು ಹೋದಾಗ ಏಕಾಏಕಿ ಗುಡುಗು ಸಿಡಿಲು ಸಹಿತ ಮಳೆ ಆರಂಭವಾಗಿದ್ದು, ಈ ವೇಳೆ ದುರಂತ ಸಂಭವಿಸಿದೆ.Home … Continue reading *ಒಂದೆಡೆ ಆಲಿಕಲ್ಲು ಮಳೆ: ಮತ್ತೊಂದೆಡೆ ಸಿಡಿಲು ಬಡಿದು ಒಂದೇ ದಿನ 7 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed