Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ತಾಪಮಾನ ಹೆಚ್ಚಿದ್ದು, ಇನ್ನೊಂದೆಡೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಏಪ್ರಿಲ್ 15ರವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಪ್ಪಳ, ಬಾಗಲಕೋಟೆ,ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲಬುರ್ಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಲೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು ರಾಮನಗರ ಜಿಲ್ಲೆಗಳಲ್ಲಿ ಏಪ್ರಿಲ್ 12ರಂದು ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಹಿತಿ ನೀಡಿದೆ.

ಇದೇ ವೇಳೆ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನ, ಉಷ್ಣಾಂಶ ಇನ್ನಷ್ಟು ಹೆಚ್ಚಲಿದೆ ಎಂದು ತಿಳಿಸಿದೆ.

Related Articles

Back to top button