Kannada NewsLatestNational

*ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದ CWRC*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಶಾಕ್ ಆಗಿದೆ. ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಲಾಗಿದೆ.

ದೆಹಲಿಯ ಸಿಡಬ್ಲು ಆರ್ ಸಿ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಅಕ್ಟೋಬರ್ 16ರಿಂದ 31ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಅಧಿಕಾರಿಗಳು ಹಾಗೂ ಆಯಾ ರಾಜ್ಯದ ವಕೀಲರು ಭಾಗಿಯಾಗಿದ್ದರು.


Home add -Advt

Related Articles

Back to top button