Kannada NewsKarnataka NewsLatest

*ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದಿದ್ದ ಪಿಸಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಸಸ್ಪೆಂಡ್ ಮಾಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನನ್ನು ಈಗಾಗಲೆ ಸಿಐಡಿ ಬಂಧಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಸಿಐಡಿ ಪೊಲೀಸರು ಆರೋಪಿ ಆರ್.ಡಿ.ಪಾಟೀಲ್ ನ ವೈದ್ಯಕೀಯ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದಿದ್ದ ಹಿನ್ನೆಲೆಯಲ್ಲಿ ಬ್ರಹ್ಮಾಪುರ ಠಾಣೆ ಕಾನ್ಸ್ ಟೇಬಲ್ ನನ್ನು ಅಮಾನತು ಮಾಡಲಾಗಿದೆ.

ಮಾಳಪ್ಪ ಭಾಸಗಿ ಸಸ್ಪೆಂಡ್ ಆದ ಪೊಲೀಸ್ ಕಾನ್ಸ್ ಟೇಬಲ್. ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ್, ಪಿಸಿ ಮಾಳಪ್ಪ ಭಾಸಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


Related Articles

Back to top button