*ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಇಂದು ಬೆಳಗ್ಗೆ 10 ಗಂಟೆ 6 ನಿಮಿಷಕ್ಕೆ ಕೆಂಪಣ್ಣ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ, ಸಾಕಷ್ಟು ಹೋರಾಟ ನಡೆಸಿದ್ದರು. ಸಿದ್ದರಾಮಯ್ಯ ಟ್ವೀಟ್ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ … Continue reading *ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ*