*ವೈಯನಾಡಿನಲ್ಲಿ ಭೀಕರ ಭೂಕುಸಿತ: ಮೂವರು ಸಾವು; ಐವರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡು ಜಿಲ್ಲೆಯ ಕೆಲಾಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಐವರು ನಾಪತ್ತೆಯಾಗಿddaare.
ನಾಪತ್ತೆಯಾದವರ ಪತ್ತೆಗಾಗಿ ವಿಪತ್ತು ನಿರ್ವಹಣಾ ಪಡೆ ತೀವ್ರ ಶೋಧ ನಡೆಸುತ್ತಿದೆ. ನಿರಂತರ ಮಳೆ ಮತ್ತು ಪ್ರದೇಶದಲ್ಲಿನ ಕೆಸರು ಮಿಶ್ರಿತ ಮಣ್ಣು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.
ಸುರಂಗ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದ್ದು, ರಸ್ತೆಯು ಸಂಪೂರ್ಣವಾಗಿ ಮಣ್ಣಿನಿಂದ ಆವೃತವಾಗಿತ್ತು. ಎನ್ಡಿಆರ್ಎಫ್ ಮತ್ತು ಸ್ಥಳೀಯ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯನಿರ್ವಹಿಸಿ ರಸ್ತೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ, ಇದರಿಂದ ರಕ್ಷಣಾ ವಾಹನಗಳ ಸಂಚಾರ ಸುಗಮವಾಗಿದೆ. ನಾಪತ್ತೆಯಾಗಿರುವವರನ್ನು ಪತ್ತೆ ಹಚ್ಚಲು ಜೆಸಿಬಿ ಯಂತ್ರಗಳನ್ನು ಬಳಸಿ ಮಣ್ಣನ್ನು ತೆರವು ಮಾಡಲಾಗುತ್ತಿದೆ.
ದುರಂತ ಸಂಭವಿಸಿದಾಗ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರೂ, ಬಹುತೇಕ ಕಾರ್ಮಿಕರು ಸುರಂಗ ಕಾಮಗಾರಿ ಸ್ಥಳದ ಸಮೀಪದ ತಾತ್ಕಾಲಿಕ ಶೆಡ್ಗಳಲ್ಲಿ ವಾಸವಾಗಿದ್ದರು. ಪ್ರಮುಖವಾಗಿ, ಕಾಮಗಾರಿ ಸ್ಥಳದಿಂದ ತೆಗೆದ ಮಣ್ಣನ್ನು ಬೆಟ್ಟದ ಮುಂಭಾಗದಲ್ಲಿ ಅವೈಜ್ಞಾನಿಕವಾಗಿ ಶೇಖರಣೆ ಮಾಡಿದ್ದೇ ಈ ಭೂಕುಸಿತದ ತೀವ್ರತೆಗೆ ಕಾರಣವೆಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯಬೇಕಿದೆ.




