Kannada NewsKarnataka News

ಖಾನಾಪುರ: ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಖಾನಾಪುರ -ಖಾನಾಪುರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕರ್ನಾಟಕ ರಾಜ್ಯೋತ್ಸವವನ್ನು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ಕನ್ನಡಪರ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ ಉತ್ಸಾಹದಿಂದ ಆಚರಿಸುವಂತೆ ಮತ್ತು ಸಂಘ ಸಂಸ್ಥೆಗಳು, ಅಧಿಕಾರಿಗಳು ರಾಜ್ಯೋತ್ಸವದ ವಂತಿಗೆಯನ್ನು ಸಕಾಲದಲ್ಲಿ ನೀಡಿ ಸಹಕರಿಸಬೇಕು ಎಂದು ತಹಶೀಲ್ದಾರ ಶಿವಾನಂದ ಉಳ್ಳೇಗಡ್ಡಿ ಅವರು  ಕರೆ ನೀಡಿದರು.

ಈ ಸಲದ  ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಖಾನಾಪುರ ತಹಶೀಲ್ದಾರ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪೂರ್ವ ಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ರಾಜ್ಯೋತ್ಸವ ಆಚರಣೆಯ ಕುರಿತಂತೆ ತಾಲೂಕು ಆಡಳಿತ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆದು ರಾಜ್ಯೋತ್ಸವದ ದಿನ ಕನ್ನಡ ನಾಡು ನುಡಿಯ ಬಗ್ಗೆ ಬೆಳಕು ಚೆಲ್ಲುವ ರೂಪಕಗಳನ್ನು ಆಯೋಜಿಸುವ ನಿರ್ಣಯ ಕೈಗೊಳ್ಳಲಾಯಿತು.

Home add -Advt

ಹೆಸ್ಕಾಂ ಇಲಾಖೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ಅಲಂಕಾರ, ಪೋಲಿಸ್ ಇಲಾಖೆ ಕಾನೂನು ಸುವ್ಯವಸ್ಥೆ ಹಾಗೂ ಮೆರವಣಿಗೆ ವಾಹನಗಳನ್ನು ಪೂರೈಕೆ ಜವಾಬ್ದಾರಿ, ಪಟ್ಟಣ ಪಂಚಾಯಿತಿ ಸಮಾರಂಭ ಜರುಗುವ ವೇದಿಕೆಯ ಸಿದ್ಧತೆ ಸೇರಿದಂತೆ ಇನ್ನಿತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.

ಸಿಪಿಐ ಮೋತಿಲಾಲ ಪವಾರ, ತಾ.ಪಂ.ಇ.ಓ ಲಕ್ಷ್ಮಣರಾವ್ ಯಕ್ಕುಂಡಿ, ರವಿ ಕಾರಡಗಿ, ಮೇಘಾ ಕುಂದರಗಿ, ಚಂಬಣ್ಣ ಹೊಸಮನಿ, ದಶರಥ ಬನೋಶಿ, ಜಯಂತ ತಿಣೈಕರ, ರವಿ ಹೆಬ್ಬಾಳಕರ, ರೇವಣಸಿದ್ಧಯ್ಯ ಹೀರೇಮಠ, ಸುರೇಶ ಶಿಂಗೆ, ಮಲ್ಲೇಶಿ ಪೋಳ,  ಕನ್ನಡ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಮಾರುತಿ ಚೋಟಣ್ಣವರ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button