Belagavi NewsBelgaum NewsKannada NewsKarnataka NewsLatestPolitics

*ನಾಯಿ ಕಡಿತದಿಂದ ಮಗು ಸಾವು: ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ನೆರವು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಯಿ ಕಡಿತದಿಂದ ಮೃತಪಟ್ಟ ಖಾನಾಪುರ ತಾಲೂಕಿನ ಗೋಧೋಳಿ ಗ್ರಾಮದ ಬಾಲಕಿಯ ಕುಟುಂಬಕ್ಕೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆರ್ಥಿಕ ನೆರವು ನೀಡಿದರು.

ನಾರಾಯ‌ಣ ಕದಮ್ ಅವರ 5 ವರ್ಷದ ಮಗಳು ಮನೆ ಕಟ್ಟೆಯ ಮೇಲೆ ಆಟ ಆಡುವ ಸಮಯದಲ್ಲಿ ನಾಯಿ ಕತ್ತಿನ ಭಾಗಕ್ಕೆ ಬಲವಾಗಿ ಕಚ್ಚಿರುವ ಕಾರಣ ಮಗುವಿನ ಮೆದುಳಿಗೆ ಇನ್ಫೆಕ್ಷನ್ ಆಗಿ ಯಾವುದೇ ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ. ಆ ಮಗುವಿನ ತಂದೆ, ತಾಯಿಗೆ ಸಾಂತ್ವನವನ್ನು ಹೇಳಿ, ಧೈರ್ಯ ತುಂಬಿದ ಲಕ್ಷ್ಮೀ ಹೆಬ್ಬಾಳಕರ್, ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ಚೆಕ್ ನೀಡಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button