Kannada NewsKarnataka NewsLatest

*ಬಾಯಿ ಇದೆ ಎಂದು ಏನೇನೋ ಮಾತನಾಡುವುದಲ್ಲ; ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಕಿಚ್ಚ ಸುದೀಪ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿರ್ಮಾಕರು ಹಾಗೂ ನಟ ಕಿಚ್ಚ ಸುದೀಪ್ ನಡುವಿನ ಜಗಳ ತಾರಕಕ್ಕೇರಿದ್ದು, ತನ್ನ ವಿರುದ್ಧ ವಂಚನೆ ಆರೋಪ ಮಾಡಿದ್ದ ನಿರ್ಮಾಪಕ ಎನ್.ಎಂ.ಕುಮಾರ್ ಹಾಗೂ ಎಂ.ಎನ್.ಸುರೇಶ್ ವಿರುದ್ಧ ಕಿಚ್ಚ ಸುದೀಪ್ ಕಾನೂನು ಸಮರ ಸಾರಿದ್ದಾರೆ.

ಇಬ್ಬರೂ ನಿರ್ಮಾಪಕರ ವಿರುದ್ಧ ನಟ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಮುಂದಿನ ವಿಚಾರಣೆಯನ್ನು ಕೋರ್ಟ್ ಜುಲೈ 17ಕ್ಕೆ ಮುಂದೂಡಿದೆ.

ಕೋರ್ಟ್ ಬಳಿ ಮಾತನಾಡಿರುವ ನಟ ಸುದೀಪ್, ಬಾಯಿ ಇದೆ ಅಂತಾ ಏನೇನೋ ಮಾತನಾಡುವುದಲ್ಲ. ನನ್ನ ವಿರುದ್ಧ ಆರೋಪ ಮಾಡಿದ್ದಕ್ಕೆ ನಿರ್ಮಾಪಕರಿಗೆ ಸ್ಪಷ್ಟನೆ ನೀಡುವಂತೆ ಈಗಾಗಲೇ ನಾನು ನೋಟೀಸ್ ನೀಡಿದ್ದೆ. ನನ್ನ ನೋಟೀಸ್ ಗೆ ಉತ್ತರ ನೀಡದ ಹಿನ್ನೆಲೆಯಲ್ಲಿ ನಾನು ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಎಲ್ಲದಕ್ಕೂ ಉತ್ತರ ಕೊಡಬೇಕಿದೆ. ಎಲ್ಲಾ ಸಮಸ್ಯೆ ಕಾನೂನು ಪ್ರಕಾರವೇ ಬಗೆಹರಿಯಲಿ ಎಂದಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button